ಗದಗ (ಕರ್ನಾಟಕ ವಾರ್ತೆ) ಜುಲೈ 2: ಗಜೇಂದ್ರಗಡ ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತು ನಗರ ಸ್ಥಳೀಯ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ಡೇನಲ್ಮ ಯೋಜನೆಯ ಸ್ವಸಹಾಯ ಸದಸ್ಯರುಗಳನ್ನು ಕಮ್ಯುನಿಟಿ ಮೊಬೈಲೈಜರ್ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅವಕಾಶವಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನ ಜುಲೈ 7 ಆಗಿದ್ದು ಹೆಚ್ಚಿನ ವಿವರಗಳಿಗಾಗಿ ಗಜೇಂದ್ರಗಡ ಪುರಸಭೆಯ ಆರೋಗ್ಯ ಶಾಖೆಯನ್ನು ಸಂಪರ್ಕಿಸಬಹುದಾಗಿದೆ.