ಮಂಗಳೂರು | ವಾಟ್ಸ್ ಆ್ಯಪ್ ನಲ್ಲಿ ಸುಳ್ಳು ಸಂದೇಶ ರವಾನೆ ಆರೋಪ: ಇಬ್ಬರು ಅರೆಸ್ಟ್

Share
0Shares

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ರವಾನಿಸಿದ ಆರೋಪದಲ್ಲಿ ಇಬ್ಬರನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

ತಾಳಿಪಾಡಿ ಗುತ್ತಕಾಡು ಶಾಂತಿನಗರ ನಿವಾಸಿಗಳಾದ ಮೊಹಮ್ಮದ್ ಅನ್ವರ್ (44 ) ಮತ್ತು ತಾಯಿರ್ ನಕಾಶ್ (42) ಬಂಧಿತ ಆರೋಪಿಗಳು.

ಆರೋಪಿಗಳು ಅ.15ರಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನಿಸಿದ್ದಾರೆ. ಈ ಸಂದೇಶದಲ್ಲಿ ‘ಒಂದು ಗ್ಯಾಂಗ್ ಇದೆ. ಯಾರೂ ನಿರ್ಲಕ್ಷ್ಯ ಮಾಡಬೇಡಿ. ಬಜಪೆ, ಸುರತ್ಕಲ್ ಅಂತಲ್ಲ, ಅವರ ಗ್ಯಾಂಗ್ ಇರುವುದು ಭಟ್ಟಕೋಡಿಯಲ್ಲಿ. ಬಜಪೆ, ಸುರತ್ಕಲ್‌ನ ಜನರು ಮಾತ್ರವಲ್ಲ ಕಿನ್ನಿಗೋಳಿಯವರು ಕ್ಯಾರ್‌ಫುಲ್ ಆಗಿರಬೇಕು ಇತ್ಯಾದಿಯಾಗಿ ಸಂದೇಶ ರವಾನಿಸಿದ್ದಾರೆ. ಸಮಾಜದಲ್ಲಿ ಕೋಮುಗಲಭೆ ಆಗುವಂತಹ ಈ ಸಂದೇಶವನ್ನು ವಾಟ್ಸ್‌ಆ್ಯಪ್ ಮೂಲಕ ರವಾನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಗಾಗಿ ಇಂತಹ ಆಂತಕಕಾರಿ ಸಂದೇಶಗಳ ಬಗ್ಗೆ ಸಾರ್ವಜನಿಕರು ಗಮನ ಕೊಡಬಾರದು ಮತ್ತು ಇಂತಹ ಸಂದೇಶಗಳನ್ನು ಶೇರ್ ಮಾಡದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282